ರಸ್ತೆ ಅಪಘಾತದಲ್ಲಿ ಸ್ನೇಹಿತೆ ಮೃತ್ಯು: ಬಸ್ಸಿನ ಮುಂಭಾಗಕ್ಕೆ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Update: 2024-10-06 03:38 GMT

ಚೆನ್ನೈ: ತನ್ನ ಸಹಪಾಠಿ ಮತ್ತು ಸ್ನೇಹಿತೆ ಬೈಕ್ ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬಸ್ಸಿನ ಮುಂಭಾಗಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಈಸ್ಟ್ ಕೋಸ್ಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

20 ವರ್ಷ ವಯಸ್ಸಿನ ಯುವತಿ ಬೈಕ್ ಅಪಘಾತದಲ್ಲಿ ಮೃತಪಟ್ಟು ಕೇವಲ 30 ನಿಮಿಷಗಳಲ್ಲಿ ಆಕೆಯ ಸ್ನೇಹಿತ, ಸಹಪಾಠಿ ಬಸ್ಸಿನ ಮುಂಭಾಗಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ. ಮೃತರನ್ನು ಉದಿರಮೆರೂರಿನ ಎಸ್.ಯೋಗೇಶ್ವರನ್ ಮತ್ತು ಮದುರಾಂತಕಂನ ಇ.ಸಬ್ರೀನಾ ಎಂದು ಗುರುತಿಸಲಾಗಿದೆ.

ಇಬ್ಬರೂ ಮಹಾಬಲಿಪುರಂಗೆ ಭೇಟಿ ನೀಡಿ ಕಾಲೇಜಿಗೆ ಬೈಕ್ ನಲ್ಲಿ ವಾಪಸ್ಸಾಗುತ್ತಿದ್ದಾಗ, ಮಧ್ಯಾಹ್ನ 12.30ರ ಸುಮಾರಿಗೆ ಪುದುಚೇರಿ ರಸ್ತೆ ಸಾರಿಗೆ ನಿಗಮದ ಬಸ್ಸಿನ ಹಿಂಭಾಗ ಬೈಕ್ ಗೆ ಬಡಿದು ದುರಂತ ಸಂಭವಿಸಿದೆ ಎಂದು ಪೊಲೀಸರು ವಿವರಿಸಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಸಬ್ರೀನ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಈ ಸುದ್ದಿ ಕೇಳುತ್ತಿದ್ದಂತೆಯೇ ಯೋಗೇಶ್ವರನ್ ಇಸಿಆರ್ಗೆ ಓಡಿಹೋಗಿ ಬಸ್ಸಿನ ಮುಂಭಾಗಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News