ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಭಯೋತ್ಪಾದಕ ಬಲಿ

Update: 2023-09-16 05:02 GMT

Photo: PTI

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

"ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಫಾರ್ವರ್ಡ್ ಪ್ರದೇಶದಲ್ಲಿ ಭಯೋತ್ಪಾದಕರು ಹಾಗೂ ಸೇನೆ ಮತ್ತು ಬಾರಾಮುಲ್ಲಾ ಪೊಲೀಸರ ನಡುವೆ ಎನ್ ಕೌಂಟರ್ ನಡೆದಿತ್ತು" ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ ಕೌಂಟರ್  ಶನಿವಾರ 4 ನೇ ದಿನವನ್ನು ಪ್ರವೇಶಿಸಿತು, ಎನ್ ಕೌಂಟರ್ ವೇಳೆ ದೊಡ್ಡ ಸ್ಫೋಟಗಳು ಕೇಳಿಬಂದವು. ಭಯೋತ್ಪಾದಕರ ಪತ್ತೆಗೆ ಡ್ರೋನ್ ಕಣ್ಗಾವಲು ಕೂಡ ಬಳಸಲಾಗುತ್ತಿತ್ತು.

ವಿವರಗಳ ಪ್ರಕಾರ, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಹೆಚ್ಚಿನ ಭಯೋತ್ಪಾದಕರನ್ನು ಹುಡುಕುತ್ತಿವೆ

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News