ಮಹಾರಾಷ್ಟ್ರ: ಹೆದ್ದಾರಿಯ ಹೋಟೆಲ್ ಗೆ ನುಗ್ಗಿದ ಟ್ರಕ್, 15 ಜನರ ಮೃತ್ಯು, ಹಲವರಿಗೆ ಗಾಯ

Update: 2023-07-04 16:58 GMT

Photo: PTI

ಮುಂಬೈ: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ವೊಂದು ಹೆದ್ದಾರಿ ಪಕ್ಕದ ಹೋಟೆಲ್ ಗೆ ನುಗ್ಗಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟಿದ್ದು,20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮುಂಬೈ-ಆಗ್ರಾ ಹೆದ್ದಾರಿಯಲ್ಲಿಯ ಶಿರಪುರ ತಾಲೂಕಿನ ಪಳಾಸನೇರ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಬ್ರೇಕ್ ವೈಫಲ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಿಯಂತ್ರಣ ಕಳೆದುಕೊಂಡಿದ್ದ ಟ್ರಕ್ ಹೋಟೆಲ್ ಗೆ ನುಗ್ಗುವ ಮುನ್ನ ಎರಡು ಬೈಕ್ ಗಳು, ಒಂದು ಕಾರು ಮತ್ತು ಇನ್ನೊಂದು ಕಂಟೇನರ್ ಟ್ರಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿತ್ತು.

ಹೆದ್ದಾರಿಯಲ್ಲಿನ ಬಸ್ ನಿಲುದಾಣದ ಸಮೀಪದ ಹೋಟೆಲ್ ಗೆ ಡಿಕ್ಕಿ ಹೊಡೆದ ಬಳಿಕ ಟ್ರಕ್ ಪಲ್ಟಿಯಾಗಿತ್ತು. ಕನಿಷ್ಠ 15 ಜನರು ಮೃತಪಟ್ಟಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

ಗಾಯಾಳುಗಳನ್ನು ಶಿರಪುರ ಮತ್ತು ಧುಲೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News