ಅಕ್ರಮವಾಗಿ ಮರ ಕಡಿದಿದ್ದಾರೆಂದು ಆರೋಪಿಸಿ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

Update: 2023-08-19 13:40 GMT

ಜೈಪುರ್:‌ ಅಕ್ರಮವಾಗಿ ಮರ ಕಡಿಯುತ್ತಿದ್ದಾರೆಂಬ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ಮುಸ್ಲಿಂ ವ್ಯಕ್ತಿಯನ್ನು ಹತ್ಯೆಗೈದು ಇತರ ಇಬ್ಬರನ್ನು ಗಾಯಗೊಳಿಸಿದ ಘಟನೆ ರಾಜಸ್ಥಾನದ ಆಲ್ವಾರ್‌ ಎಂಬಲ್ಲಿ ನಡೆದಿದೆ. ಮೂವರೂ ವಾಹನವೊಂದರಲ್ಲಿದ್ದಾಗ ಒಂದು ಡಜನಿಗೂ ಅಧಿಕ ಜನರು ಅವರನ್ನು ತಡೆದಿದ್ದರು ಎಂದು ವರದಿಯಾಗಿದೆ.

ಘಟನೆ ಗುರುವಾರ ರಾತ್ರಿ ನಡೆದಿದ್ದು ಮೃತ ವಾಸಿಂ ಎಂಬಾತನ ತಂದೆ ದೂರು ದಾಖಲಿಸಿದ್ದಾರೆ. ರಾಮಪುರ್‌ ಪ್ರದೇಶದಲ್ಲಿ ತಮ್ಮ ಮಗ ಹಾಗೂ ಇತರ ಇಬ್ಬರು ಮರಗಳನ್ನು ತುಂಡು ಮಾಡಿದ್ದಾರೆಂಬ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಸ್ಥಳೀಯರು ಪೊಲೀಸರು ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ನಂತರ ಮೂವರಿಗೂ ಥಳಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿದ್ದ ವಾಸಿಂ ಶುಕ್ರವಾರ ಮೃತಪಟ್ಟಿದ್ದಾನೆ.

ಮೂವರೂ ಅಕ್ರಮವಾಗಿ ಮರ ಕಡಿಯುತ್ತಿದ್ದಾರೆಂಬ ಆರೋಪ ಎದುರಿಸುತ್ತಿದ್ದರೆಂದು ಪೊಲೀಸರು ಹೇಳಿದ್ದಾರೆ.

ಹತ್ಯೆ ಹಾಗೂ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೆಲ ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ಕು ಅರಣ್ಯ ಅಧಿಕಾರಿಗಳನ್ನೂ ಅಮಾನತುಗೊಳಿಸಲಾಗಿದೆ.

ಆರು ಮಂದಿ ಗ್ರಾಮಸ್ಥರು ಮತ್ತು ಓರ್ವ ಜೆಸಿಬಿ ಚಾಲಕನನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ.

ಆದರೆ ಈ ಘಟನೆಯು ಯಾವುದೇ ಜಾತಿ ಅಥವಾ ಧರ್ಮದ ಕಾರಣ ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News