ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಹರ್ಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ

Update: 2024-10-09 07:47 GMT

Photo:X/@narendramodi

ಹೊಸದಿಲ್ಲಿ: ಹರ್ಯಾಣದಲ್ಲಿ ಸತತ ಮೂರನೆಯ ಬಾರಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಹೊಸದಿಲ್ಲಿಗೆ ಆಗಮಿಸಿದ್ದ ಹರ್ಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ನಂತರ, ಅವರು ಪ್ರಧಾನಿ ನಿವಾಸದಿಂದ ಚಂಡೀಗಢದತ್ತ ತೆರಳಿದರು.

ಈ ನಡುವೆ, ಹರ್ಯಾಣದಲ್ಲಿನ ಕಾಂಗ್ರೆಸ್ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ (ಉದ್ಧವ್ ಬಣ) ನಾಯಕ ಸಂಜಯ್ ರಾವತ್, ಹರ್ಯಾಣದಲ್ಲಿ ತಾನೇ ಏಕಾಂಗಿಯಾಗಿ ಗೆಲುವು ಸಾಧಿಸಬಲ್ಲೆ ಎಂದು ಕಾಂಗ್ರೆಸ್ ಭಾವಿಸಿದ್ದರಿಂದ, ಹರ್ಯಾಣದಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಹರ್ಯಾಣದಲ್ಲಿನ ಬಿಜೆಪಿ ಗೆಲುವಿನ ಕುರಿತು ಪ್ರತಿಕ್ರಿಯಿಸಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ, ಪ್ರಧಾನಿ ನರೇಂದ್ರ ಮೋದಿ ದಲಿತರು ಹಾಗೂ ಮೀಸಲಾತಿ ವಿರೋಧಿ ಅಲ್ಲ ಎಂಬುದು ಈ ಫಲಿತಾಂಶದಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News