ಪುಣೆ | ಪೋರ್ಷೆ ಕಾರು ಅಪಘಾತ ಪ್ರಕರಣ ; ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕನ ಬಿಡುಗಡೆಗೆ ಹೈಕೋರ್ಟ್ ಆದೇಶ

Update: 2024-06-25 11:18 GMT
PC : NDTV

ಮುಂಬೈ: ಪುಣೆ ಪೋರ್ಷೆ ಕಾರು ಅಪಘಾತದದ ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕನನನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಪುಣೆ ಪೋರ್ಷೆ ಕಾರು ಅಪಘಾತದ ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕನನ್ನು ಬಾಲ ವೀಕ್ಷಣಾ ಕೇಂದ್ರದಿಂದ ಬಿಡುಗಡೆ ಮಾಡುವಂತೆ ಸೂಚಿಸಿದೆ.

ಜೂನ್ 14 ರಂದು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕನನ್ನು ಅಕ್ರಮ ಬಂಧನದಲ್ಲಿದ್ದಾರೆ ಎಂದು, ಆತನ ಚಿಕ್ಕಮ್ಮ ಆರೋಪಿಸಿ ಸಲ್ಲಿಸಿದ್ದ ಮನವಿಯನ್ನು ತುರ್ತು ವಿಚಾರಣೆ ನಡೆಸಲು ನ್ಯಾಯಾಲಯ ನಿರಾಕರಿಸಿತ್ತು.

ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕ ಕುಡಿದ ಮತ್ತಿನಲ್ಲಿ ಪೋರ್ಷೆ ಕಾರು ಚಲಾಯಿಸಿ ಇಬ್ಬರು ಬೈಕ್‌ ಸವಾರರ ಸಾವಿಗೆ ಕಾರಣನಾಗಿದ್ದನು ಎಂದು ಆರೋಪಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News