ʼಬಿಜೆಪಿಯಿಂದ ಟಿಕೆಟ್ ಆಮಿಷ ಒಡ್ಡಲಾಗಿತ್ತುʼ: ಇ.ಡಿ ದಾಳಿ ಬಳಿಕ ಕಾಂಗ್ರೆಸ್ ಶಾಸಕಿ ಹೇಳಿಕೆ

Update: 2024-03-13 03:35 GMT

Photo: ANI

ರಾಂಚಿ: ಕಾನೂನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ನ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಅವರ ಮನೆ ಮೇಲೆ ಬುಧವಾರ ರಾತ್ರಿ ದಾಳಿ ಮಾಡಿದ ಬೆನ್ನಲ್ಲೇ, ತಮಗೆ ಬಿಜೆಪಿ ವತಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಆಮಿಷ ಒಡ್ಡಲಾಗಿತ್ತು ಎಂದು ಬಹಿರಂಗಪಡಿಸಿದ್ದಾರೆ.

ಬಿಜೆಪಿ ಸೇರಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕಾನೂನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮನೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಅವರು ಆಪಾದಿಸಿದ್ದಾರೆ.

"ಹಜಾರಿಬಾಗ್ ನಿಂದ ಬಿಜೆಪಿ ಟಿಕೆಟ್ನಲ್ಲಿ ಲೋಕಸಭೆಗೆ ಸ್ಪರ್ಧಿಸುವಂತೆ ಆಫರ್ ಬಂದಿದ್ದು, ಇದನ್ನು ನಾನು ನಿರಾಕರಿಸಿದ್ದೆ. ಬಿಜೆಪಿಯ ಕೆಲ ಮುಖಂಡರು ಛಾತ್ರಾದಿಂದ ಲೋಕಸಭೆಗೆ ಸ್ಪರ್ಧಿಸುವಂತೆ ನನಗೆ ಒತ್ತಡ ತಂದಿದ್ದರು. ಆದರೆ ನಾವು ಕಾಂಗ್ರೆಸ್ ಪಕ್ಷದವರು. ನಾವು ಬರ್ಕಾಗಾಂವ್ ಕ್ಷೇತ್ರವನ್ನು ನಿರಂತರವಾಗಿ ಗೆಲ್ಲುತ್ತಾ ಬಂದಿದ್ದೇವೆ" ಎಂದು ಅಂಬಾ ಪ್ರಸಾದ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News