ರಾಯಚೂರು | ಬಯಲು ಶೌಚಕ್ಕೆ ತೆರಳಿದ್ದ ಮಹಿಳೆ ಮೇಲೆ ತಿಳಿಯದೆ ಮಣ್ಣು ಸುರಿದ ಜೆಸಿಬಿ ಚಾಲಕ : ಮಹಿಳೆ ಮೃತ್ಯು

Update: 2024-08-15 08:27 GMT

ರಾಯಚೂರು : ಬಯಲು ಶೌಚಕ್ಕೆ ತೆರಳಿದ್ದ ವೇಳೆ ಮಹಿಳೆಯೊಬ್ಬರ ಮೇಲೆ ಅಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಚಾಲಕ ಮಣ್ಣು ಸುರಿದಿದ್ದು, ಪರಿಣಾಮ ಮಹಿಳೆಯು ಸಾವನ್ನಪ್ಪಿರುವ ಘಟನೆ ನಗರದ ಆಶಾಪುರ ರಸ್ತೆಯಲ್ಲಿನ ಜನತಾ ಕಾಲೋನಿಯಲ್ಲಿ ಗುರುವಾರ ವರದಿಯಾಗಿದೆ.

ಮೃತ ಮಹಿಳೆಯನ್ನು ತಾಯಮ್ಮ(32) ಎಂದು ಗುರುತಿಸಲಾಗಿದ್ದು, ಜೆಸಿಬಿ ಚಾಲಕ ಮಣ್ಣು ಸುರಿದಿದ್ದರಿಂದ ಉಸಿರಾಡಲಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನಿವೇಶನ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ತಿಳಿಯದ ಜೆಸಿಬಿ ಚಾಲಕನಿಂದ ಈ ಅಚಾತುರ್ಯ ನಡೆದಿದೆ ಎನ್ನಲಾಗಿದೆ. ಖಾಲಿ ನಿವೇಶನದಲ್ಲಿ ಕೆಲ ಮಹಿಳೆಯರು ಬಯಲು ಶೌಚಕ್ಕೆ ಹೋಗುತ್ತಿದ್ದರು. ಈ ನಿವೇಶನವನ್ನು ಜೆಸಿಬಿ ಮೂಲಕ ಸ್ವಚ್ಛಗೊಳಿಸಲಾಗುತ್ತಿತ್ತು. ಈ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯ ವಿಷಯ ತಿಳಿದ ಪೊಲೀಸರು ಜೆಸಿಬಿ ಚಾಲಕನನ್ನು ವಶಕ್ಕೆ ಪಡೆದಿದ್ದು, ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News