ಬೆಜ್ಜವಳ್ಳಿ: ಬೈಕ್‌ ಗೆ ಬಸ್ ಢಿಕ್ಕಿ; ಡಿಪ್ಲೋಮಾ ವಿದ್ಯಾರ್ಥಿ ಮೃತ್ಯು

Update: 2024-10-18 06:26 GMT

ಶಿವಮೊಗ್ಗ: ಖಾಸಗಿ ಬಸ್ಸೊಂದು ಬೈಕ್‌ ಗೆ  ಢಿಕ್ಕಿ ಹೊಡೆದ ಪರಿಣಾಮ ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ತೀರ್ಥಹಳ್ಳಿ ತಾಲೂಕು ತನಿಕಲ್‌ನ ಪಾಂಡ್ಯ ಗ್ರಾಮದ ಪ್ರಥಮ್‌ ಸಾವನ್ನಪ್ಪಿದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಸಕ್ರೆಬೈಲು ಕಡೆಗೆ ತೆರಳುತ್ತಿದ್ದ ಗೋವಾ ನೋಂದಣಿಯ ಬಸ್ಸು ಬೆಜ್ಜವಳ್ಳಿ ಬಳಿ ಪ್ರಥಮ್‌ನಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದಆತನನ್ನು ಕೂಡಲೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Full View 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News