ಬಿ.ಎಸ್. ಯಡಿಯೂರಪ್ಪ ಬಿಜೆಪಿಗೆ ಮತ್ತೆ ಶಕ್ತಿ ತುಂಬುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2024-03-09 18:05 GMT

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (File Photo)

ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ದೊಡ್ಡ ಸೋಲನುಭವಿಸಿದರೂ ಬಿ.ಎಸ್. ಯಡಿಯೂರಪ್ಪ ಎದೆಗುಂದದೆ ಲೋಕಸಭೆ ಚುನಾವಣೆಗೆ ಬಿಜೆಪಿಗೆ ಮತ್ತೆ ಶಕ್ತಿ ತುಂಬುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು..

ಶಿವಮೊಗ್ಗದಲ್ಲಿ ಶನಿವಾರ ನಡೆದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಲೋಕಸಭೆ ಚುನಾವಣೆಯಲ್ಲಿ ಬಿಎಸ್ ವೈ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆಂದು ಶಪಥ ಮಾಡಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ, ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಯಡಿಯೂರಪ್ಪ ಅವರು ಪರಿಶ್ರಮದಿಂದಲೇ ರಾಜಕೀಯ ಸಾಧನೆ ಮಾಡಿದವರು. ಅವರು ಹಿಂದುತ್ವದ ರಕ್ಷಣೆಗಾಗಿ ಶ್ರಮಿಸಿದ್ದಾರೆ. 45 ವರ್ಷಗಳ ಸುದೀರ್ಘ ಹೋರಾಟದ ಫಲವಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಸದೃಢವಾಗಿ ಬೆಳೆಸಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

ಯಡಿಯೂರಪ್ಪ ಅವರನ್ನು ಎಲ್ಲರೂ ಮುಂಗೋಪಿ ಎನ್ನುತ್ತಾರೆ. ಆದರೆ ಅವರದ್ದು ಸಾತ್ವಿಕ ಕೋಪ. ಅವರೆಂದೂ ದ್ವೇಷ ಸಾಧನೆ ಮಾಡಿದವರಲ್ಲ. ಬದಲಾಗಿ ಒಂದು ಒಳಿತನ್ನು ಸಾಕರಗೊಳಿಸುವ ಛಲಗಾರ ಎಂದು ಬಣ್ಣಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News