ಶಿವಮೊಗ್ಗ| ಹಲವು ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪ: ನಾಲ್ವರು ಸೆರೆ

Update: 2023-12-20 10:56 GMT

ಶಿವಮೊಗ್ಗ: ಹಲವು ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ನಾಲ್ವರನ್ನು ಶಿವಮೊಗ್ಗದ ತುಂಗಾ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ ಪಿರಿಯಾಪಟ್ಟಣ ನಿವಾಸಿ ಸಂತೋಷ (36), ಶಿವಮೊಗ್ಗದ ಅಶೋಕ ನಗರದ ನಿವಾಸಿಗಳಾದ ಮಹಮ್ಮದ್  (30), ಇಮ್ರಾನ್ (32) ಹಾಗೂ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಸುರೇಶ್ ಕೆ (43) ಬಂಧಿತ ಆರೋಪಿಗಳು.

ಬಂಧಿತರಿಂದ 12.65 ಲಕ್ಷ ರೂ. ಮೌಲ್ಯದ 230 ಗ್ರಾಂ ತೂಕದ ಬಂಗಾರ, 72 ಸಾವಿರ ರೂ. ಮೌಲ್ಯದ 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳು, 25,140 ನಗದು, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಬಂಧನದಿಂದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5  ಕಳವು ಪ್ರಕರಣಗಳು ಇತ್ಯರ್ಥವಾಗಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಮಂಜುನಾಥ್  ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News