ಶಿವಮೊಗ್ಗ: ಮಾಜಿ ಕಾರ್ಪೊರೇಟರ್ ಮೇಲೆ ತಂಡದಿಂದ ಹಲ್ಲೆ

Update: 2024-08-16 04:24 GMT

ಶಿವಮೊಗ್ಗ, ಆ.16: ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ.

ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ.

ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ ತಂಡವೊಂದು ದಾಳಿ ನಡೆಸಿದೆ. ಸತೀಶ್ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ತಮ್ಮ ಮೇಲೆ ಹಲ್ಲೆಯ ಆತಂಕದಿಂದ ಸತೀಶ್ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿರುವ ಎಸ್ಪಿ ಮಿಥುನ್ ಕುಮಾರ್ ಜಿ.ಕೆ., ಮೊಟ್ಟೆ ಸತೀಶ್ ಮೇಲೆ ಜಮೀನು ವ್ಯಾಜ್ಯದ ಸಲುವಾಗಿ ಹಲ್ಲೆ ನಡೆದಿದೆ. ಜಮೀನು ಖರೀದಿಯ ವಿಚಾರಕ್ಕೆ ಸತ್ಯನಾರಾಯಣ ರಾಜು ವ್ಯಾಜ್ಯ ಹೊಂದಿದ್ದರು. ಅದೇ ಕಾರಣಕ್ಕೆ ಅವರ ಮೇಲೆ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ರೌಡಿ ಎಲಿಮೆಂಟ್ಸ್ ಕಂಡುಬಂದಿಲ್ಲ ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News