ಶಿವಮೊಗ್ಗ: ದುರಸ್ತಿ ವೇಳೆ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು

Update: 2024-01-23 12:06 GMT

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ವಿದ್ಯುತ್ ಕಂಬದಲ್ಲಿ ಲೈನ್ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಅರಹತೊಳಲು ಕೈಮರದ ಸಮೀಪ ಹನುಮಂತಾಪುರ ರಸ್ತೆಯ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

ಚಂದ್ರಶೇಖರ್ ಲಮಾಣಿ (27) ಮೃತರು. ಬ್ಯಾಡಗಿ ತಾಲೂಕು ಸಿಡೆನೂರು ಗ್ರಾಮದ ಚಂದ್ರಶೇಖರ್, ಜ್ಯೂನಿಯರ್ ಲೈನ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ತೋಟಗಳ ಐಪಿ ಸೆಟ್ ಲೈನ್ ದುರಸ್ಥಿ ವೇಳೆ ಘಟನೆ ಸಂಭವಿಸಿದೆ. ಕಂಬದ ಮೇಲೆ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಪ್ರವಹಿಸಿ ಚಂದ್ರಶೇಖರ್ ಲಮಾಣಿ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಮೃತನ ಸ್ವಗ್ರಾಮಕ್ಕೆ ಮೃತದೇಹ ರವಾನಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News