ಶಿವಮೊಗ್ಗ | ಪಿಕಪ್ - ಬೈಕ್ ನಡುವೆ ಅಪಘಾತ : ಇಬ್ಬರು ಮೃತ್ಯು

Update: 2024-08-13 11:50 GMT

ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ  ಮಂಗಳವಾರ ತೀರ್ಥಹಳ್ಳಿ ತಾಲೂಕಿನ ಅಗಸರಕೋಣೆ ಬಳಿ ನಡೆದಿದೆ.

ಅಗಸರಕೋಣೆಯ ಶರತ್ ಹಾಗೂ ಕೇರಳದ ಮೂಲದ ಸಂತೋಷ್ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಅಪಘಾತ ಸಂಭವಿಸಿದೆ.

ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಒಬ್ಬ ಹಾಗೂ ಪಿಕಪ್ ನಲ್ಲಿದ್ದ ಮತ್ತೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದು, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News