ಶಿವಮೊಗ್ಗ| ಒಣಗಲು ಹಾಕಿದ್ದ ಅಡಿಕೆ ಕಳ್ಳತನ; ಆರೋಪಿಗಳನ್ನು ಬಂಧಿಸಿದ ಪೊಲೀಸರು

Update: 2023-11-28 17:43 GMT

ಶಿವಮೊಗ್ಗ: ಮನೆ ಸಮೀಪ ಒಣಗಲು ಹಾಕಿದ್ದ ಕ್ವಿಂಟಾಲ್‌ಗಟ್ಟಲೆ ಅಡಿಕೆಯನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.

ಹೊಸನಗರದ ಹರತಾಳು ಗ್ರಾಮದ ರಾಘವೇಂದ್ರ (28) ಮತ್ತು ನಂಜವಳ್ಳಿ ಗ್ರಾಮದ ‍ಶ್ರೀಧರ್‌ (52) ಬಂಧಿತರು.

ಹರತಾಳು ಮಜಿರೆ ಕ್ವಾಡ್ರಿಗೆ ಗ್ರಾಮದ ಬಾಲರಾಜ್‌ ಎಂಬುವವರ ಮನೆ ಪಕ್ಕದಲ್ಲಿ ನ.16ರಂದು ಒಣಗಿಸಲು ಹಾಕಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಅಡಿಕೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು ಕ್ವಿಂಟಾಲ್‌ 85 ಕೆ.ಜಿ ಅಡಿಕೆ, ಕೃತ್ಯಕ್ಕೆ ಬಳಸಿದ್ದ ಲಗೇಜ್‌ ಆಟೋ ವಶಪಡಿಸಿಕೊಂಡಿದ್ದಾರೆ. ಇನ್ನು, ರಿಪ್ಪನ್‌ಪೇಟೆ ಸುತ್ತಮುತ್ತ ಕಳುವಾಗಿದ್ದ 300 ರಬ್ಬರ್‌ ಶೀಟ್‌ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.

ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಹೊಸನಗರ ಇನ್ಸ್‌ಪೆಕ್ಟರ್‌ ಗುರಣ್ಣ ಹೆಬ್ಬಾಳ್‌ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್‌, ಸಿಬ್ಬಂದಿ ಶಿವಕುಮಾರ್‌ ನಾಯ್ಕ, ಉಮೇಶ್‌ ಮತ್ತು ಸಂತೋಷ್‌ ತಂಡದಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News