ಶಿವಮೊಗ್ಗ: ಪ್ರಧಾನಿ ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಈಶ್ವರಪ್ಪರಿಗೆ ಇಲ್ಲ ಆಸನ ವ್ಯವಸ್ಥೆ!

Update: 2024-03-18 09:50 GMT

ಶಿವಮೊಗ್ಗ, ಮಾ.18: ಪ್ರಧಾನಿ ನರೇಂದ್ರ ಮೋದಿ ಇಂದು ಶಿವಮೊಗ್ಗದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಒಟ್ಟು 43 ಮಂದಿ ನಾಯಕರಿಗೆ ವೇದಿಕೆಯಲ್ಲಿ ಆಸೀನರಾಗಲು ಅವಕಾಶ ಕಲ್ಪಿಸಲಾಗಿದ್ದರೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪರಿಗೆ ಸ್ಥಾನ ಕಲ್ಪಿಸಿಲ್ಲ ಎಂದು ತಿಳಿದುಬಂದಿದೆ.

ತನ್ನ ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ನಡೆಯುವ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ಈಗಾಗಲೇ ಹೇಳಿದ್ದರು. ಈ ನಡುವೆ ರಾಜ್ಯ ಬಿಜೆಪಿ ನಾಯಕರೇ ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಈಶ್ವರಪ್ಪರಿಗೆ ಆಸನವನ್ನು ಮೀಸಲಿಟ್ಟಿಲ್ಲ ಎಂದು ತಿಳಿದುಬಂದಿದೆ.

ಇನ್ನು ಮೋದಿ ಕಾರ್ಯಕ್ರಮದ ಪಟ್ಟಿಯನ್ನು ಬಿಟುಗಡೆ ಮಾಡಲಾಗಿದ್ದು, 43 ನಾಯಕರು ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಅದರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದಿಂದ ಜೆಡಿಎಸ್ ಶಾಸಕಿ ಶಾರದಾ ಪೂರ್ಯ ನಾಯ್ಕ ಅವರಿಗೂ ವೇದಿಕೆಯಲ್ಲಿ ಆಸನ ಮೀಸಲಿಡಲಾಗಿದೆ. ಆದರೆ, ಈಶ್ವರಪ್ಪ ಅವರಿಗೆ ಮಾತ್ರ ಆಸನ ಮೀಸಲಿಟ್ಟಿಲ್ಲ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News