ಶಿವಮೊಗ್ಗ: ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

Update: 2024-04-04 05:00 GMT

ಶಿವಮೊಗ್ಗ, ಎ.4: ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಳ್ಳರು ಎಗರಿಸಿ ಪರಾರಿಯಾದ ಘಟನೆ ನಗರದ ಮಲ್ಲೇಶ್ವರಂ ನಗರದಲ್ಲಿ ನಡೆದಿದೆ.

ಮಲ್ಲೇಶ್ವರಂ ನಗರದಲ್ಲಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರ ಮನೆ ಬಳಿ ಈ ಕೃತ್ಯ ನಡೆದಿದ್ದು, ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಳ್ಳರು ಕಿತ್ತುಕೊಂಡ ಸರ 30 ಗ್ರಾಂ ತೂಕ ಇತ್ತೆನ್ನಲಾಗಿದೆ.

ಈ ಸಂಬಂಧ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News