ಶಿವಮೊಗ್ಗ| ಯುವಕನ ಹತ್ಯೆ: ಮೂವರ ಬಂಧನ

Update: 2023-12-20 10:45 GMT

ಶಿವಮೊಗ್ಗ: ವೈನ್ ಶಾಪ್ ಒಂದರಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭದ್ರಾವತಿ ಸಮೀಪದಲ್ಲಿ  ನಡೆದಿದೆ. 

ಮೃತ ವ್ಯಕ್ತಿಯನ್ನು ಹೇಮಂತ್ ಎಂದು ಗುರುತಿಸಲಾಗಿದ್ದು, ನ್ಯೂ ಟೌನ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸತ್ಯಾನಂದ, ಮುಬಾರಕ್, ಖಲೀಲ್ ಎಂಬುವವರನ್ನು ಬಂಧಿಸಿ ವಿಚಾರಣೆ ಕೈಗೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News