ಶಿವಮೊಗ್ಗ | ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಮಗು ಮೃತ್ಯು

Update: 2024-09-05 09:11 GMT

ಸಾಂದರ್ಭಿಕ ಚಿತ್ರ(PC:Meta AI)

ಶಿವಮೊಗ್ಗ : ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗುವಳ್ಳಿಯಲ್ಲಿ ನಡೆದಿದೆ.

ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್‌ ಮೃತಪಟ್ಟ ಮಗು. ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮಗು ಮುಚ್ಚಳ ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿದೆ, ಇದರಿಂದಾಗಿ ಮಗುವಿನ ಉಸಿರಾಟದಲ್ಲಿ ಏರುಪೇರಾಗಿದೆ. ತಕ್ಷಣವೇ ಕುಟುಂಬದವರು ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಮಗು ಮಾರ್ಗಮಧ್ಯೆ ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News