ತೀರ್ಥಹಳ್ಳಿ | ಮಂಗನ ಕಾಯಿಲೆಗೆ ಬಾಲಕ ಮೃತ್ಯು

Update: 2025-04-18 10:55 IST
ತೀರ್ಥಹಳ್ಳಿ | ಮಂಗನ ಕಾಯಿಲೆಗೆ ಬಾಲಕ ಮೃತ್ಯು

ಸಾಂದರ್ಭಿಕ ಚಿತ್ರ

  • whatsapp icon

ಮಂಗನ‌ ಕಾಯಿಲೆಗೆ (ಕೆಎಫ್‌ಡಿ ) ಬಾಲಕನೊರ್ವ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮೃತ ಬಾಲಕನನ್ನು  ರಚಿತ್(7) ಎಂದು ಗುರುತಿಸಲಾಗಿದೆ.

ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ರಚಿತ್ ಗೆ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ 12 ದಿನಗಳ ಕಾಲ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿತು. ರಚಿತ್ ಕೋಣಂದೂರಿನ ನವಜ್ಯೋತಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News