ತೀರ್ಥಹಳ್ಳಿ | ಮಂಗನ ಕಾಯಿಲೆಗೆ ಬಾಲಕ ಮೃತ್ಯು
Update: 2025-04-18 10:55 IST

ಸಾಂದರ್ಭಿಕ ಚಿತ್ರ
ಮಂಗನ ಕಾಯಿಲೆಗೆ (ಕೆಎಫ್ಡಿ ) ಬಾಲಕನೊರ್ವ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತ ಬಾಲಕನನ್ನು ರಚಿತ್(7) ಎಂದು ಗುರುತಿಸಲಾಗಿದೆ.
ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ರಚಿತ್ ಗೆ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ 12 ದಿನಗಳ ಕಾಲ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿತು. ರಚಿತ್ ಕೋಣಂದೂರಿನ ನವಜ್ಯೋತಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.