ಸಿದ್ದರಾಮಯ್ಯ ಈ ರಾಜ್ಯದ ಸಿಎಂ, ಅವರನ್ನು ಗೌರವದಿಂದಲೇ ಕರೆಯುವೆ: ಬಿಜೆಪಿ ಶಾಸಕ ಯತ್ನಾಳ್

Update: 2024-01-14 14:22 GMT

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲೇ ಕರೆದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಸಿದ್ದರಾಮಯ್ಯ ಈ ರಾಜ್ಯದ ಮುಖ್ಯಮಂತ್ರಿ ಅವರನ್ನು ಗೌರವದಿಂದಲೇ ಕರೆಯುವೆ’ ಎಂದು ಹೇಳಿದ್ದಾರೆ.

‘ಅನಂತಕುಮಾರ್ ಹೆಗಡೆ ಅವರಂತೆ ನಾನು ಏಕವಚನದಲ್ಲಿ ಮಾತನಾಡುವುದಿಲ್ಲ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಮುಖ್ಯಮಂತ್ರಿ ಆಗಿದ್ದಾರೆ. ನಾವು ಏನೇ ಆದರೂ ಅವರನ್ನು ಗೌರವಿಸುವೆ. ಸದ್ಯ ಅವರು ಅಯೋಧ್ಯೆಗೆ ಹೋಗುತ್ತೇನೆ ಎಂದಿದ್ದಾರೆ. ಈಗಲಾದರೂ ಅವರಿಗೆ ಬುದ್ಧಿ ಬಂದಿದೆ’ ಎಂದು ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News