ಬಿಜೆಪಿ ಹೆಸರಲ್ಲಿ ಅಕ್ರಮ ನಡೆದಿದ್ದು ಗೊತ್ತಿದ್ದು ಸಿ.ಟಿ.ರವಿ ಸುಮ್ಮನಿದ್ದಿದ್ದು ಏಕೆ? ಇದರಲ್ಲಿ ಇನ್ನೂ ನಿಗೂಢತೆ ಇದೆಯೇ: ಕಾಂಗ್ರೆಸ್ ಪ್ರಶ್ನೆ

Is there more mystery in the silence of CT Ravi: Congress question

Update: 2023-09-19 10:45 GMT

ಬೆಂಗಳೂರು, ಸೆ.19: ಬಿಜೆಪಿ ಹೆಸರಲ್ಲಿ ಅಕ್ರಮ ನಡೆದಿದ್ದರೂ, ಹಣದ ವಂಚನೆ ನಡೆದಿದ್ದ ಸಂಗತಿ ಮೊದಲೇ ಗೊತ್ತಿತ್ತು, ಬಿಜೆಪಿಗೂ ಪಕ್ಷಕ್ಕೂ ಗೊತ್ತಿತ್ತು ಎಂಬ ಸತ್ಯ ಹೊರಬಿದ್ದಿದೆ. ಗೊತ್ತಿದ್ದರೂ ಸಿ.ಟಿ.ರವಿ ಸುಮ್ಮನಿದ್ದಿದ್ದು ಏಕೆ? ಆ ಮೌನದಲ್ಲಿ ಇನ್ನೂ ಹೆಚ್ಚಿನ ನಿಗೂಢತೆ ಇದೆಯೇ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಬಗ್ಗೆ 'X' (ಟ್ವಿಟರ್) ನ 'Karnataka Congress' ಖಾತೆಯಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ಟಿಕೆಟ್ ಹಗರಣದಲ್ಲಿ ಹಲವು ತಿಮಿಂಗಿಲಗಳ ಹೆಸರು ಬಹಿರಂಗವಾಗುತ್ತಿದೆ. ಬಿಜೆಪಿಯ ಬಾಡಿಗೆ ಭಾಷಣಕಾರರು, ಖಾವಿ ವೇಷಧಾರಿ ವಂಚಕರು ಇದರಲ್ಲಿ ತಳುಕು ಹಾಕಿಕೊಂಡಿದ್ದಾರೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೆಸರು ಬಹಿರಂಗವಾದ ನಂತರ ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಈ ವಂಚನೆಯ ಸಂಗತಿ ಮೊದಲೇ ಗೊತ್ತಿತ್ತು, ಬಿಜೆಪಿಗೂ ಪಕ್ಷಕ್ಕೂ ಗೊತ್ತಿತ್ತು ಎಂಬ ಸತ್ಯ ಹೊರಬಿದ್ದಿದೆ. ಹಣದ ಅಕ್ರಮ ವಹಿವಾಟು ನಡೆದಿದ್ದು, ಪಕ್ಷದ ಹೆಸರಲ್ಲಿ ಅಕ್ರಮ ನಡೆದಿದ್ದರೂ, ಹಣದ ವಂಚನೆ ನಡೆದಿದ್ದರೂ ಸಿ.ಟಿ.ರವಿ ಸುಮ್ಮನಿದ್ದಿದ್ದು ಏಕೆ? ಆ ಮೌನದಲ್ಲಿ ಇನ್ನೂ ಹೆಚ್ಚಿನ ನಿಗೂಢತೆ ಇದೆಯೇ ಎಂದು ರಾಜ್ಯ ಬಿಜೆಪಿಯನ್ನು ಪ್ರಶ್ನಿಸಿದೆ.


Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News