ಕ್ರಿಕೆಟಿಗ ಮುಹಮ್ಮದ್ ಸಿರಾಜ್‌ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ

Update: 2024-08-10 17:00 GMT

ಹೈದರಾಬಾದ್ : ಐಸಿಸಿ ಟಿ20 ವಿಶ್ವಕಪ್‌ ಗೆದ್ದ ಭಾರತ ತಂಡದಲ್ಲಿದ್ದ ವೇಗದ ಬೌಲರ್ ಮುಹಮ್ಮದ್ ಸಿರಾಜ್‌ಗೆ ತೆಲಂಗಾಣ ಸರಕಾರವು ನಿವೇಶನ ಮಂಜೂರು ಮಾಡಿದೆ.

ಜುಬಿಲಿ ಹಿಲ್ಸ್‌ನ ರಸ್ತೆ ಸಂಖ್ಯೆ 78 ರಲ್ಲಿ 600 ಚದರ ಭೂಮಿಯನ್ನು ಮಂಜೂರು ಮಾಡುವ ಆದೇಶವನ್ನು ತೆಲಂಗಾಣ ಸರ್ಕಾರ ಬಿಡುಗಡೆ ಮಾಡಿದೆ.

ಜುಲೈ 31 ರಂದು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಸಿರಾಜ್ ಅವರಿಗೆ ನಗರದಲ್ಲಿ ಮನೆ ನಿವೇಶನ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಸಿರಾಜ್ ಅವರೊಂದಿಗೆ, ಶೂಟರ್ ಇಶಾ ಸಿಂಗ್ ಮತ್ತು ಎರಡು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ನಿಖತ್ ಝರೀನ್‌ ಅವರಿಗೂ ಹೈದರಾಬಾದ್‌ ನಲ್ಲಿ ತಲಾ 600 ಚದರಗಳಷ್ಟು ಮನೆ ನಿವೇಶನಗಳನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ.

ಸಿರಾಜ್ ಮತ್ತು ನಿಖತ್ ಝರೀನ್ ಕ್ರೀಡೆಗೆ ನೀಡಿದ ಕೊಡುಗೆಗಾಗಿ ಸರ್ಕಾರವು ಈಗಾಗಲೇ ಗ್ರೂಪ್-1 ಉದ್ಯೋಗಗಳನ್ನು ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News