ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ನ 20 ಶಾಸಕರು ದೂರು ಕೊಟ್ಟಿದ್ದಾರೆ: ಬಿಜೆಪಿ ಆರೋಪ

Update: 2023-07-25 08:04 GMT

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ರಚನೆಯಾದ ಎರಡೇ ತಿಂಗಳಲ್ಲಿ ಸಚಿವರ ವಿರುದ್ಧ 20 ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ''ರಾಜ್ಯದಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ, ಅತಿಯಾದ ಹಸ್ತಕ್ಷೇಪದಿಂದ ಕೋಪಗೊಂಡು ಕಾಂಗ್ರೆಸ್‌ನ 30 ಶಾಸಕರು, ಈಗ 20 ಸಚಿವರ ವಿರುದ್ಧ ತಿರುಗಿಬಿದ್ದು, ಸಿಎಂ ಮಧ್ಯ ಪ್ರವೇಶಿಸುವಂತೆ ದೂರು ಸಲ್ಲಿಸಿದ್ದಾರೆ'' ಎಂದು ಹೇಳಿದೆ. 

''ಸರ್ಕಾರ ರಚನೆಯಾದ ಎರಡೇ ತಿಂಗಳಲ್ಲಿ, ಸ್ವಪಕ್ಷೀಯ ಶಾಸಕರಿಂದಲೇ ಸಿದ್ದರಾಮಯ್ಯರವರ ಸರ್ಕಾರ ಅವಿಶ್ವಾಸವನ್ನು ಎದುರಿಸುತ್ತಿದೆ. ಈ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂಬುದನ್ನು ಬೇರೆ ಯಾರೂ ಹೇಳಬೇಕಾಗಿಲ್ಲ, ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ'' ಎಂದು ಬಿಜೆಪಿ ಆರೋಪ ಮಾಡಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News