ರಾಜ್ಯದಲ್ಲಿ 201 ಕೊರೋನ ಸೋಂಕು ಪ್ರಕರಣ ದೃಢ

Update: 2023-12-30 15:41 GMT

ಬೆಂಗಳೂರು: ರಾಜ್ಯದಲ್ಲಿ ಶನಿವಾರ 201 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, 60 ಜನರು ಗುಣಮುಖರಾಗಿದ್ದಾರೆ.

24 ಗಂಟೆಗಳಲ್ಲಿ 7,060 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. 15 ಜನ ಸೋಂಕಿತರು ಐಸಿಯುನಲ್ಲಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 833ಕ್ಕೆ ಏರಿಕೆಯಾಗಿದೆ. ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಸೋಂಕಿತ ಬಲಿ: ಮೈಸೂರು ಜಿಲ್ಲೆಯಲ್ಲಿ ಒಬ್ಬ ಕೋವಿಡ್ ಸೋಂಕಿತ ಸಾವನ್ನಪ್ಪಿದ್ದಾನೆ. ಸೋಂಕಿನ ಪಾಸಿಟಿವಿಟಿ ದರ ಶೇ.2.84 ದಾಖಲಾಗಿದೆ.

ಎಲ್ಲೆಲ್ಲಿ ಎಷ್ಟು: ಹೊಸದಾಗಿ 201 ಪ್ರಕರಣಗಳು ದೃಢವಾಗಿದ್ದು, ಆ ಪೈಕಿ ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 4, ಬೆಂ.ಗ್ರಾಮಾಂತರ 10, ಬೆಂಗಳೂರು ನಗರ 69, ಬೀದರ್ 2, ಚಾಮರಾಜನಗರ 9, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 4, ಚಿತ್ರದುರ್ಗ 5, ದಕ್ಷಿಣ ಕನ್ನಡ 9, ದಾವಣಗೆರೆ 2, ಧಾರವಾಡ 4, ಗದಗ 2, ಹಾಸನ 8, ಮಂಡ್ಯ 7, ಮೈಸೂರು 25, ರಾಮನಗರ 5, ಶಿವಮೊಗ್ಗ 3, ವಿಜಯನಗರ 6 ಹಾಗೂ ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News