ಉತ್ತರ ಕರ್ನಾಟಕದಲ್ಲಿ ಲುಲು ಗ್ರೂಪ್‍ನಿಂದ 300 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ್

Update: 2024-01-24 16:01 GMT

Photo:X/@MBPatil

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಲುಲು ಗ್ರೂಪ್, ವಿಜಯಪುರದಲ್ಲಿ ತಮ್ಮ ನೆಲೆ ವಿಸ್ತರಿಸಿ 300 ಕೋಟಿ ರೂ.ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರ್ಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಮುಂದಾಗಿವೆ ಎಂದು ಬೃಹತ್ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬುಧವಾರ ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ಪ್ರವಾಸದ ಫಲಶ್ರುತಿ ತಿಳಿಸುವ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪೆನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ 23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ ಎಂದರು.

ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ದಾವೋಸ್ ಪ್ರವಾಸದ ಫಲಶ್ರುತಿ ತಿಳಿಸುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಸ್ಲೆ, ಎಚ್‍ಪಿ, ಎಚ್‍ಸಿಎಲ್, ವೋಲ್ವೊ ಗ್ರೂಪ್, ಐಕಿಯಾ, ಸೋನಿ, ಮೈಕ್ರೊಸಾಫ್ಟ್, ಹಿಟಾಚಿ ಮತ್ತಿತರ ಜಾಗತಿಕ ಉದ್ಯಮಗಳ ಪ್ರಮುಖರ ಜೊತೆಗೆ ರಾಜ್ಯದ ನಿಯೋಗವು 50ಕ್ಕೂ ಹೆಚ್ಚಿನ ಸಭೆಗಳನ್ನು ನಡೆಸಿತು. ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮಥ್ರ್ಯದ ಬೃಹತ್ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವಕ್ರ್ಸ್ ಕಂಪೆನಿಯು 20,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ಪ್ರಕಟಿಸಿದೆ ಎಂದರು.

ಇನ್ನೂ, ಇದರಿಂದ 1000 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಡಿಜಿಟಲ್ ಕೌಶಲ್ಯಾಭಿವೃದ್ಧಿಗೆ ಪ್ರಕ್ರಿಯೆ ಹಮ್ಮಿಕೊಳ್ಳಲು ಮೈಕ್ರೊಸಾಫ್ಟ್ ವಾಗ್ದಾನ ಮಾಡಿದೆ. ಗ್ರಾಮೀಣ ಪ್ರದೇಶ ಕೇಂದ್ರೀತ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಹಿಟಾಚಿ ಕಂಪೆನಿಯು ‘ಎಂಒಯು’ಗೆ ಸಹಿ ಹಾಕಿದೆ’ ಎಂದ ಅವರು, ಬೆಂಗಳೂರಿನ ಆಚೆ’ಗೂ ಕೈಗಾರಿಕೆಗಳ ಅಭಿವೃದ್ಧಿಗೆ ಸಮಾನ ಕೊಡುಗೆ ನೀಡಲು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮ ವಹಿವಾಟು ಆರಂಭಿಸಲು ಹಲವಾರು ಕಂಪೆನಿಗಳು ಆಸಕ್ತಿ ತೋರಿಸಿವೆ. ವಿಜಯಪುರ, ಹುಬ್ಬಳ್ಳಿಮ ಧಾರವಾಡ, ಬೆಳಗಾವಿ ಮತ್ತಿತರ ಸ್ಥಳಗಳಲ್ಲಿ ಕೈಗಾರಿಕೆಗಳ ಸಮಾನ ಅಭಿವೃದ್ಧಿ ಸಾಧಿಸುವುದಕ್ಕೆ ಕೊಡುಗೆ ನೀಡುವ ಹಲವಾರು ಉಪಕ್ರಮಗಳನ್ನು ಹಮ್ಮಿಕೊಳ್ಳಲಿವೆ ಎಂದು ವಿವರಿಸಿದರು.

ಸ್ಮಾರ್ಟ್ ಸಿಟಿ ಮೂಲಸೌಲಭ್ಯ, ನವೀಕರಿಸಬಹುದಾದ ಇಂಧನ ಪರಿಹಾರಗಳು, ಡೇಟಾ ಕೇಂದ್ರಗಳು ಮತ್ತು ಸಂಬಂಧಿತ ವಲಯಗಳಲ್ಲಿ ವಿವಿಧ ಕಂಪೆನಿಗಳಿಂದ ಒಟ್ಟಾರೆ 3,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಳಹರಿವು ಕಂಡುಬಂದಿದೆ. ಎಬಿ ಇನ್‍ಬೇವ್ ಇಂಡಿಯಾ ಕಂಪನಿಯು ಕರ್ನಾಟಕದಲ್ಲಿ ತನ್ನ ಮದ್ಯ ತಯಾರಿಕಾ ಘಟಕಗಳ ತಯಾರಿಕಾ ಸಾಮಥ್ರ್ಯ ಹೆಚ್ಚಿಸಲು 400 ಕೋಟಿ ಮೊತ್ತದ ಬಂಡವಾಳ ತೊಡಗಿಸುವ ಇಂಗಿತ ವ್ಯಕ್ತಪಡಿಸಿದೆ ಎಂದು ಸಚಿವರು ವಿವರಿಸಿದರು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್‍ರೂಪ್ ಕೌರ್, ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಿಇಒ ಡಾ.ಮಹೇಶ್ ಸೇರಿದಂತೆ ಪ್ರಮುಖರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News