ರಸ್ತೆಗೆ ಬಿದ್ದ ಮರ: ಚಿಕ್ಕಮಗಳೂರು– ಮಂಗಳೂರು ರಸ್ತೆ ಸಂಚಾರ ಕೆಲ ಕಾಲ ಬಂದ್

Update: 2023-07-25 15:20 GMT

ಚಿಕ್ಕಮಗಳೂರು: ಮಂಗಳವಾರ ಸಂಜೆ ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಾವಿನಹಳ್ಳ ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಚಿಕ್ಕಮಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 173ಯಲ್ಲಿ ವಾಹನಗಳ ಸಂಚಾರಕ್ಕೆ ಕೆಲ ಹೊತ್ತು ತೊಂದರೆಯಾಗಿತ್ತು.

ಬೃಹತ್ ಮರವನ್ನು ತಕ್ಷಣಕ್ಕೆ ತೆರವು ಮಾಡಲು ಸಾಧ್ಯವಾಗದ ಕಾರಣಕ್ಕೆ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಬೇಕಾಯಿತು. ರಸ್ತೆಗೆ ಬಿದ್ದ ಮರದಿಂದಾಗಿ ವಾಹನಗಳ ಸುಗಮ ಸಂಚಾರ ಸಾಧ್ಯವಾಗದೇ ಸುಮಾರು 2 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಸ್ತೆಯಿಂದ ಮರವನ್ನು ತೆರವುಗೊಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News