ರಾಜ್ಯಸಭೆ ಕಲಾಪಕ್ಕೆ ಗೈರು: ಕಾರಣ ತಿಳಿಸಿದ ಮಾಜಿ ಪ್ರಧಾನಿ ದೇವೇಗೌಡ

Update: 2023-08-08 07:14 GMT

ಬೆಂಗಳೂರು: ಸೋಮವಾರ ರಾಜ್ಯಸಭೆ ಕಲಾಪಕ್ಕೆ ಗೈರಾಗಿದ್ದಕ್ಕೆ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಕಾರಣ ತಿಳಿಸಿದ್ದಾರೆ.

ಈ ಕುರಿತು ನಿನ್ನೆ ರಾತ್ರಿ ತುರ್ತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಮಾಹಿತಿ ನೀಡಿರುವ ಅವರು, ಅನಾರೋಗ್ಯದದಿಂದ ಸೋಮವಾರ ರಾಜ್ಯಸಭೆ ಕಲಾಪದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ. 

ಅಲ್ಲದೆ, ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆಯನ್ನು ಇಂದೇ ಆಯೋಜಿಸಲಾಗಿತ್ತು. ಸೊಂಟದ ನೋವಿನ ಕಾರಣ ಆ ಸಭೆಯಲ್ಲೂ ಬಹಳ ಹೊತ್ತು ಕೂರಲು ತಮ್ಮಿಂದ ಆಗಲಿಲ್ಲ. ಹತ್ತು ನಿಮಿಷವಷ್ಟೇ ಆ ಸಭೆಗೆ ಹಾಜರಾಗಿ ನಂತರ ವೈದ್ಯರಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿ ವಿಶ್ರಾಂತಿ ಪಡೆಯುತ್ತಿರುವುದಾಗಿ ಮಾಜಿ ಪ್ರಧಾನಿಗಳು ತಿಳಿಸಿದ್ದಾರೆ.

ಮನೆಯಲ್ಲಿಯೇ ಕಲಾಪ ವೀಕ್ಷಣೆ:

ಇದರ ನಡುವೆ ಮಾಜಿ ಪ್ರಧಾನಿಗಳು ಮನೆಯಲ್ಲಿಯೇ ಟೀವಿಯಲ್ಲಿ ರಾಜ್ಯಸಭೆ ಕಲಾಪದ ನೇರ ಪ್ರಸಾರ ವೀಕ್ಷಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News