ರಸ್ತೆ ಅಪಘಾತ: ಸ್ಯಾಂಡಲ್‌ವುಡ್ ನಟ ಸೂರಜ್ ಗೆ ಗಂಭೀರ ಗಾಯ

Update: 2023-06-25 12:50 GMT
ನಟ ಸೂರಜ್

ಗುಂಡ್ಲುಪೇಟೆ: ನಿರ್ಮಾಪಕಿ ದಿವಂಗತ ಪಾರ್ವತಮ್ಮ‌ ರಾಜ್‌ಕುಮಾರ್ ಅವರ ಕಿರಿಯ ಸಹೋದರ ಎಸ್.ಎ.ಶ್ರೀನಿವಾಸ್ ಪುತ್ರ, ನಟ ಸೂರಜ್ ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

ಶನಿವಾರ (ಜೂನ್​ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ಸೂರಜ್​ ಬೈಕ್​ನಲ್ಲಿ ಊಟಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಸೂರಜ್ ಅವರ ಕಾಲಿನ ಮೇಲೆ ಟಿಪ್ಪರ್​ ಹರಿದಿದೆ ಎನ್ನಲಾಗಿದೆ. ಹೀಗಾಗಿ, ಅವರ ಬಲಗಾಲಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News