ಹುಲಿ ಉಗುರು ಪ್ರಕರಣ;‌ ವರ್ತೂರು ಸಂತೋಷ್ ಗೆ ಜಾಮೀನು

Update: 2023-10-27 14:22 GMT

ಬೆಂಗಳೂರು, ಅ.27: ಹುಲಿ ಉಗುರು ಒಳಗೊಂಡ ಲಾಕೆಟ್ ಧರಿಸಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ವರ್ತೂರು ಸಂತೋμï(34) ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಎಸಿಜೆಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಗ್‍ಬಾಸ್ ರಿಯಾಲಿಟಿ ಶೋನ ಸ್ಪರ್ಧಿ ಸಂತೋಷ್ ಅವರನ್ನು ಕಗ್ಗಲೀಪುರ ವಲಯ ಅರಣ್ಯಾಧಿಕಾರಿ ನೇತೃತ್ವ ತಂಡವು ಅ.22ರಂದು ಬಂಧಿಸಿತ್ತು. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಸಂತೋಷ್ ರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ಸಂತೋಷ್ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ವ್ಯಕ್ತಿಯೊಬ್ಬರಿಂದ ಶ್ಯೂರಿಟಿ ಒದಗಿಸಬೇಕು ಹಾಗೂ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಬೇಕು ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.

ಸಂತೋಷ್ ಪರ ವಾದ ಮಂಡಿಸಿದ್ದ ವಕೀಲರು, ಸಂತೋಷ್ ಕೃಷಿ ಕುಟುಂಬದವರು. ಇದುವರೆಗೂ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ. ಹುಲಿ ಉಗುರು ಧರಿಸಿದ್ದ ನಟ, ನಿರ್ಮಾಪಕರು ಹಾಗೂ ಇತರರಿಗೆ ನೋಟಿಸ್ ನೀಡಿರುವ ಅಧಿಕಾರಿಗಳು, ಸಂತೋಷ್ ಅವರಿಗೆ ಅಂಥ ಯಾವುದೇ ನೋಟಿಸ್ ನೀಡದೇ ಬಂಧಿಸಿದ್ದರು. ವೀರಪ್ಪನ್ ರೀತಿಯಲ್ಲಿ ಸಂತೋಷ್ ಅವರನ್ನು ನಡೆಸಿಕೊಳ್ಳಲಾಗಿದೆ ಎಂದು ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News