ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದ ನಟ ಚೇತನ್‌ ಅಹಿಂಸಾ

Update: 2023-12-11 12:17 GMT

ಬೆಂಗಳೂರು: ಧಾರ್ಮಿಕ ಸಾಮರಸ್ಯ ಎಂದರೆ ಅಸಮಾನತೆಯ ಸಂರಕ್ಷಣೆ. ಆದ್ದರಿಂದ  ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ನಟ ಚೇತನ್‌ ಅಹಿಂಸಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಎಕ್ಸ್‌ ನಲ್ಲಿ ಬರೆದುಕೊಂಡಿರುವ ಅವರು, " ಗಾಂಧಿಯವರ 'ಧಾರ್ಮಿಕ ಸಾಮರಸ್ಯ' ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ. ಖಾಸಗಿಯಾಗಿ, ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ (ಆರ್ಟಿಕಲ್ 25); ಸಾರ್ವಜನಿಕವಾಗಿ, ನಾವು ಜಾತ್ಯತೀತ ರಾಷ್ಟ್ರ - ಅಂದರೆ ಧರ್ಮದಿಂದ ದೂರ ಇರುವುದಾಗಿದೆ, ಹಾಗೂ ಧಾರ್ಮಿಕ ಸಾಮರಸ್ಯ ಎಂದರೆ ಅಸಮಾನತೆಯ ಸಂರಕ್ಷಣೆ ಆದ್ದರಿಂದ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ವಿವಾದಾತ್ಮಕ ಪೋಸ್ಟ್ ಯೊಂದನ್ನು ಹಂಚಿಕೊಂಡಿದ್ದಾರೆ.‌

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News