3 ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ: ಡಿಸಿಎಂ ಡಿ.ಕೆ ಶಿವಕುಮಾರ್

Update: 2023-08-16 15:51 GMT

ಬೆಂಗಳೂರು: ಸಿಎಸ್‍ಆರ್ ಹಣದ ಮೂಲಕ ನೂತನ ಶಾಲೆಗಳನ್ನು ನಿರ್ಮಾಣ ಮಾಡಬೇಕು ಹಾಗೂ ಸದ್ಬಳಕೆ ಹೇಗೆ ಮಾಡಬೇಕು ಎಂಬುದಾಗಿ ಸರಕಾರ ಯೋಜನೆ ರೂಪಿಸುತ್ತಿದೆ. ನನ್ನದೂ 3 ಶಿಕ್ಷಣ ಸಂಸ್ಥೆಗಳಿದ್ದು ಪಂಚಾಯತ್ ಮಟ್ಟದಲ್ಲಿ 3 ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದರು.

ಬುಧವಾರ ನಗರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಶಿಕ್ಷಣ ಕ್ಷೇತ್ರಕ್ಕೆ ಸಿಎಸ್‍ಆರ್ ಅನುದಾನ ಸದ್ಬಳಕೆ ಕುರಿತ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ʼʼಸಿಎಸ್‍ಆರ್ ಹಣವು ಕೇವಲ ನಗರೀಕರಣಕ್ಕೆ ಮಾತ್ರ ಬಳಕೆಯಾಗುತ್ತಿದೆ, ಇದನ್ನು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎಂಬುದು ನಮ್ಮ ಆಶಯ, ಪ್ರತಿ ಪಂಚಾಯಿತಿಯಲ್ಲಿ 3 ಶಾಲೆಗಳನ್ನು ಹೊಸದಾಗಿ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಕನಸಾಗಿದೆ. ಅದಕ್ಕೆ ಹಣದ ಸದ್ಬಳಕೆ ಕುರಿತು ಸಭೆ ನಡೆಸಲಾಯಿತುʼʼ ಎಂದು ಅವರು ಮಾಹಿತಿ ನೀಡಿದರು.

ʼʼಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅವರ ಶಾಲೆಯ ಅಧ್ಯಾಪಕರನ್ನೆ ಗ್ರಾಮೀಣ ಭಾಗದ ಶಾಲೆಗಳಿಗೆ ಕಳುಹಿಸಿ ಪಾಠ ಮಾಡಬೇಕು. ಅಂತರ್‍ರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನಮ್ಮ ಕರ್ನಾಟಕದ ಪ್ರತಿ ಗ್ರಾಮೀಣ ಮಕ್ಕಳಿಗೂ ದೊರೆಯಬೇಕು ಎಂಬುದು ನಮ್ಮ ಸರಕಾರದ ಮಹತ್ವದ ಯೋಚನೆ ಮತ್ತು ಯೋಜನೆʼʼ ಎಂದು ಶಿವಕುಮಾರ್ ಹೇಳಿದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News