ಎಲ್ಲಾ ಹುದ್ದೆಗಳು ತಮ್ಮ ಮಕ್ಕಳಿಗೆ ಬೇಕು, ಬಾಕಿ ಉಳಿಸಿದ್ದರೆ ಮನೆಯ ಬೆಕ್ಕುಗಳಿಗೆ ಕೊಟ್ಟು ಬಿಡಿ: ಬಿಎಸ್​ವೈ ವಿರುದ್ಧ ಯತ್ನಾಳ್‌ ವಾಗ್ದಾಳಿ

Update: 2023-12-02 07:39 GMT

ವಿಜಯಪುರ: ಎಲ್ಲಾ ಪ್ರಮುಖ ಹುದ್ದೆಗಳು ತಮ್ಮ ತಮ್ಮ ಮಕ್ಕಳಿಗೆ ಬೇಕು. ಇನ್ನು ಏನಾದರೂ ಬಾಕಿ ಉಳಿಸಿದ್ದರೆ ಅದನ್ನು ಮನೆಯ ಬೆಕ್ಕುಗಳಿಗೆ ಕೊಟ್ಟು ಬಿಡಿ ಅಂತ ಹೇಳಿದ್ದೇನೆಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ  ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.

ವಿಜಯಪುರದ ಆನಂದ ನಗರದಲ್ಲಿ ಶುಕ್ರವಾರ ರಾತ್ರಿ ನಡೆದ ದಾನಮ್ಮದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ನನ್ನನ್ನು ವಿಜಯಪುರದಲ್ಲಿ ಸೋಲಿಸಲು ನಮ್ಮವರೇ ಹಣ ತಂದು ಹಂಚಿ ಸೋಲಿಸಲು ನೋಡಿದರು, ಆದರೆ ಜನ ನನ್ನ ಕೈ ಬಿಡಲಿಲ್ಲ. ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಆರಿಸಿಬಂದಿದ್ದೇನೆ" ಎಂದರು.

“ಅಪ್ಪ, ಮಗ ನಾಟಕ ಮಾಡಬೇಡಿ ಅಂತ ಈ ನಾನು ಹಿಂದೆ ಹೇಳಿದ್ದೆ. ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೇ ಬೇಕು. ಯಾಕಂದ್ರೆ ಆ ಖುರ್ಚಿ ಬಿಡಲು ಅವರಿಗೆ ಮನಸ್ಸಿಲ್ಲ. ರೈತರ ಬಗ್ಗೆ ಕಣ್ಣೀರು ಹಾಕೋದು ನೋಡಿದರೆ, ಎಲ್ಲಾ ಅವರದ್ದು ನಾಟಕ, ಎಲ್ಲಾ ಪ್ರಮುಖ ಹುದ್ದೆಗಳು ತಮ್ಮ ತಮ್ಮ ಮಕ್ಕಳಿಗೆ ಬೇಕು. ಇನ್ನು ಏನಾದರೂ ಬಾಕಿ ಉಳಿಸಿದ್ದರೆ ಅದನ್ನು ಮನೆಯ ಬೆಕ್ಕುಗಳಿಗೆ ಕೊಟ್ಟು ಬಿಡಿ ಅಂತ ಹೇಳಿದ್ದೇನೆ. ಪ್ರಧಾನ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಅಂತಲೂ ಮಾಡಿಕೊಳ್ಳಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News