ಪತ್ನಿಯಿಂದ ಕಿರುಕುಳ ಆರೋಪ: ಬೆಂಗಳೂರಿನ ʼನಮ್ಮ ಮೆಟ್ರೊʼ ಇಂಜಿನಿಯರ್ ಆತ್ಮಹತ್ಯೆ

Update: 2023-09-14 19:06 GMT

ಮಂಜುನಾಥ್- ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ 

ತುಮಕೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ವರದಿಯಾಗಿದೆ.

38 ವರ್ಷದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದು, ಮಂಜುನಾಥ್ ಬೆಂಗಳೂರಿನ ʼನಮ್ಮ ಮೆಟ್ರೊʼ (BMRCL) ದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. 

ಪತ್ನಿ ಪ್ರಿಯಾಂಕ ಮಾನಸಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಆರೋಪ ಕೇಳಿ ಬಂದಿದ್ದು,  ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇಪದೆ ಗಲಾಟೆ ಆಗುತ್ತಿತ್ತು. ಗಲಾಟೆಯಿಂದ ಬೇಸರಗೊಂಡು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಈ ಬಗ್ಗೆ ಮಂಜುನಾಥ್ ತನ್ನ ಸ್ನೇಹಿತನಿಗೆ ಕಳಿಸಿದ್ದರೆನ್ನಲಾದ ಮೊಬೈಲ್ ಫೋನ್ ಸಂದೇಶದ ಆಧಾರದ ಮೇಲೆ ಪತ್ನಿ ಪ್ರಿಯಾಂಕ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News