ನನಗೆ ಅಮಿತ್‌ ಶಾ ಕರೆ ಮಾಡಿಲ್ಲ: ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ

Update: 2023-08-26 12:07 GMT

ಬೆಂಗಳೂರು: ಮಾಜಿ ಸಿಎಂ ಜಗದೀಶ್​ ಶೆಟ್ಟರ್​ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆ ಮಾಡಿದ್ದಾರೆ ಎಂಬ ವದಂತಿ ಬಗ್ಗೆ ಖುದ್ದು ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ. 

ಶನಿವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಸಿದ ಶೆಟ್ಟರ್‌, ʼʼನನಗೆ ಯಾವುದೇ ಕರೆ ಬಂದಿಲ್ಲʼʼ ಎಂದು ಸ್ಪಷ್ಟಪಡಿಸಿದರು. 

ʼʼಬಿಜೆಪಿ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ನನಗೆ ಮಾತ್ರ ಯಾವುದೇ ಕರೆ ಬಂದಿಲ್ಲ. ಕೆರೆ ಬಂದರೂ ಅದಕ್ಕೆ ಉತ್ತರ ಕೊಡುವ ಪ್ರಶ್ನೆಯೇ ಇಲ್ಲʼʼ ಎಂದು ಹೇಳಿದರು. 

ʼʼಬಿಜೆಪಿಯಲ್ಲಿ ಏನಾಗುತ್ತದೆ ಎನ್ನುವ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಆಗಿಲ್ಲ. ಬಿಜೆಪಿ ಬಹಳ ಶೋಚನೀಯ ಪರಿಸ್ಥಿತಿಯಲ್ಲಿದೆ. ಮೊದಲು 120 ಸ್ಥಾನ ಗೆದ್ದಿದ್ದ ಬಿಜೆಪಿ ದಯಾನೀಯ ಸ್ಥಿತಿಗೆ ಬಂದಿದೆ. ನಮ್ಮಂತಹ ನಾಯಕರನ್ನೇ ಪಕ್ಷದಿಂದ ಹೊರಗೆ ಹಾಕಿದ್ದಾರೆʼʼ ಎಂದು​ ಆಕ್ರೋಶ ವ್ಯಕ್ತಪಡಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News