ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಕಾರ್ಖಾನೆಯೊಂದರ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ

Update: 2023-11-01 17:18 GMT

ಸಾಂದರ್ಭಿಕ ಚಿತ್ರ

ಬೆಂಗಳೂರು, ನ.1: ವೀರಭದ್ರನಗರದ ಗ್ಯಾರೇಜ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕಾರ್ಖಾನೆಯೊಂದರ ಕಾಂಪೌಂಡ್ನಲ್ಲಿದ್ದ ಸ್ಪಾಂಜ್ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಗಂಗಮ್ಮನ ಗುಡಿ ಬಳಿ ವರದಿಯಾಗಿದೆ.

ನ.1ರಂದು ಸಂಜೆ 4ಗಂಟೆ ವೇಳೆಗೆ ಘಟನೆ ನಡೆದಿದ್ದು, ಬಿಸಿಲಿನ ಝಳದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿವೆ. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ತಿಳಿದು ಬಂದಿದೆ. ಈ ಬಗ್ಗೆ ಗಂಗಮ್ಮನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News