ಮುಖ್ಯಮಂತ್ರಿಗಳಿಂದ ತುಷ್ಟೀಕರಣದ ರಾಜಕಾರಣ: ಬಸವರಾಜ ಬೊಮ್ಮಾಯಿ ಆರೋಪ

Update: 2023-12-05 09:23 GMT

ಬೆಂಗಳೂರು: ಮುಖ್ಯಮಂತ್ರಿಗಳು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರ ಸಂಪತ್ತಿನಲ್ಲಿ ಅಲ್ಪಸಂಖ್ಯಾ ತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ ಮತ ಬ್ಯಾಂಕಿನ ರಾಜಕಾರಣ ಮತ್ತು ಮುಖ್ಯಮಂತ್ರಿಯಾಗಿ ಎಲ್ಲರಿಗೂ ನ್ಯಾಯ ಕೊಡುವ ಅವರ ಕರ್ತವ್ಯವನ್ನು ಮರೆತಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.‌

ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗಾಗಲೇ ಅಲ್ಪಸಂಖ್ಯಾತರಿಗೆ ವಕ್ಪ್ ಬೊರ್ಡ್, ಮೈನಾರಿಟಿ ಕಾರ್ಪೊರೆಷನ್, ಮೈನಾರಿಟಿ ಕಮಿಷನ್ ನಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಅನುದಾನ ಬರುತ್ತಿದೆ‌ ಅವರೂ ಕೂಡ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಆಗಬೇಕೆಂಬ ಆಸೆ ಎಲ್ಲ ಸರ್ಕಾರಗಳ ಉದ್ದೇಶವಾಗಿದೆ. ಆದರೆ, ಇತರ ಎಲ್ಲ ಸಮುದಾಯಗಳ ಮೇಲೆ ಸವಾರಿ ಮಾಡುವ ರೀತಿ ಮುಖ್ಯಮಂತ್ರಿಯ ಮಾತು ಖಂಡನೀಯ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News