ವಿಧಾನಸಭೆ ಅಧಿವೇಶನ | ಸದನದಲ್ಲಿ ಗದ್ದಲ : ಕಲಾಪ ಸೋಮವಾರಕ್ಕೆ ಮುಂದೂಡಿಕೆ

Update: 2024-07-19 11:26 GMT

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಸದಸ್ಯರ ಚರ್ಚೆ-ಗದ್ದಲದಿಂದಾಗಿ ನಾಲ್ಕನೇ ದಿನದ ವಿಧಾನಸಭೆಯ ಕಲಾಪವನ್ನು ಯು.ಟಿ.ಖಾದರ್ ಅವರು ಸೋಮವಾರಕ್ಕೆ ಮುಂದೂಡಿದ್ದಾರೆ.

ಕಲಾಪವನ್ನು ಸೋಮವಾರ ಬೆಳಗ್ಗೆ10ಗಂಟೆಗೆ  ಮುಂದೂಡಲಾಗಿದ್ದು, ಪ್ರತಿಪಕ್ಷಗಳ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿವೇಶನ ಕಲಾಪದಲ್ಲಿ ಲಿಖಿತ ರೂಪದ ಪ್ರತಿಯನ್ನು ಓದುವ ಮೂಲಕ ಪ್ರತಿಪಕ್ಷಗಳಿಗೆ ಉತ್ತರ ನೀಡುತ್ತಿದ್ದರು.

ಈ ವೇಳೆ ರಾಜ್ಯ ಸರಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ಸದನದಲ್ಲಿ ವಿರೋಧ ಪಕ್ಷದ ಸದಸ್ಯರು ಪ್ರತಿಭಟಿಸಿದರು. ಗದ್ದಲದಿಂದಾಗಿ ಸದನದ ಕಲಾಪವು ಮುಂದೂಡಿಕೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News