ದಾವಣಗೆರೆ | ಯುವತಿಯೊಂದಿಗೆ ಚಿತ್ರ ಮಂದಿರಕ್ಕೆ ಬಂದ ಯುವಕರಿಬ್ಬರ ಮೇಲೆ ಹಲ್ಲೆ; ಆರೋಪಿಗಳ ಬಂಧನ

Update: 2023-07-08 13:10 GMT

ಬಂಧಿತ ಆರೋಪಿಗಳು 

ದಾವಣಗೆರೆ.ಜು.8: ಅನೈತಿಕ ಪೊಲೀಸ್ ಗಿರಿ ತೋರಿ ಯುವಕರಿಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಕೆಟಿಜೆ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಎಸ್ಪಿ ಡಾ.ಕೆ.ಅರುಣ್, ಯುವಕರ ಜೊತೆ ನಗರದ ಗೀತಾಂಜಿಲಿ ಚಿತ್ರಮಂದಿರಕ್ಕೆ ದಲಿತ ಯುವತಿಯೊಬ್ಬಳು ಆಗಮಿಸಿದ್ದಳು. ಇದನ್ನು ಕಂಡ ದೊಡ್ಡೇಶ್ ಹಾಗೂ ಆತನ ಸ್ನೇಹಿತರು ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು ಎಂದರು.

ದೂರಿನ ಅನ್ವಯ ದೊಡ್ಡೇಶ್ ಮತ್ತು ಆತನ ಸ್ನೇಹಿತರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಡಾ.ಅರುಣ್ ಮಾಹಿತಿ ನೀಡಿದರು. 

ವಿಡಿಯೋ ಹರಿಬಿಟ್ಟಿದ್ದ ಆರೋಪಿ: 

ಅನೈತಿಕ ಪೊಲೀಸ್ ಗಿರಿ ತೋರಿ ಯುವಕರ ಮೇಲೆ ಹಲ್ಲೆ ನಡೆಸುವ ವೀಡಿಯೊವನ್ನು ಆರೋಪಿ ದೊಡ್ಡೇಶ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಹರಿಬಿಟ್ಟಿದ್ದಾನೆ. ಈ ವೀಡಿಯೋದಲ್ಲಿ ಆರೋಪಿಗಳು ಯುವತಿಗೆ ಬೆದರಿಕೆ ಹಾಕುವುದು ಕೂಡ ದಾಖಲಾಗಿದೆ.  

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News