ಬೆಳಗಾವಿ ಅಧಿವೇಶನ| ಉ.ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆಗೆ ಮೊದಲ ಆದ್ಯತೆ : ಹೊರಟ್ಟಿ

Update: 2023-12-03 15:02 GMT

PHOTO: PTI

ಬೆಳಗಾವಿ: ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ  ಹೇಳಿದ್ದಾರೆ.

ರವಿವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯಾವುದೇ ಭಾಗದ ಶಾಸಕರು ಉತ್ತರ ಕರ್ನಾಟಕದ ವಿಷಯಗಳ ಕುರಿತು ಚರ್ಚೆಗೆ ಆಸಕ್ತಿ ತೋರಿದರೇ ಮೊದಲ ಆದ್ಯತೆ ನೀಡಲಾಗುವುದು ಎಂದ ಅವರು, ವಿಧಾನಪರಿಷತ್ ಕಲಾಪಗಳಿಗೆ ಈವರೆಗೆ 1207 ಪ್ರಶ್ನೆಗಳು ಸ್ವೀಕೃತವಾಗಿವೆ. ಅವುಗಳಲ್ಲಿ 1057 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ. ನಿಯಮ 72ರ ಅಡಿ 111 ಪತ್ರಗಳು ಸ್ವೀಕೃತವಾಗಿದ್ದು, ಕಲಾಪಸೂಚಿಗೆ ಸಾಕಷ್ಟು ವಿಷಯಗಳಿವೆ ಎಂದು ಹೇಳಿದರು.

ಬೆಳಗಾವಿ ಅಧಿವೇಶನವೆಂದರೇ ಪ್ರತಿಭಟನೆಗಳ ಅಧಿವೇಶನವೆಂಬ ಹಣೆಪಟ್ಟಿ ಅಳಿಸಿಹಾಕಲು ಕ್ರಮವಹಿಸಬೇಕೆಂದು ಸೂಚಿಸಿ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಪತ್ರ ಬರೆಯಲಾಗಿತ್ತು. ಸದ್ಯ ಈ ಬಾರಿ ಪ್ರತಿಭಟನೆಗಳು ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ ಎಂದು ನುಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮತ್ತಿತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News