ಬೆಂಗಳೂರು: ಅಪಾರ್ಟ್‍ಮೆಂಟ್ ಕಟ್ಟಡದ 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Update: 2023-09-22 10:11 GMT

ಮೃತ ವಿದ್ಯಾರ್ಥಿನಿ 

ಬೆಂಗಳೂರು, ಸೆ‌.22: ಇಲ್ಲಿನ ಬ್ಯಾಟರಾಯನಪುರದ ಅಪಾರ್ಟ್ ಮೆಂಟ್ ವೊಂದರ ಒಂಬತ್ತನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವುದು ವರದಿಯಾಗಿದೆ.

ವಿಜಯಲಕ್ಷ್ಮಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಎಂದು ತಿಳಿದು ಬಂದಿದೆ. 

ಮೃತ ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ಕಾಮರ್ಸ್ ಓದುತಿದ್ದು, ತಂದೆ-ತಾಯಿಗೆ ವಿಚ್ಛೇದನವಾದ ಬಳಿಕ, ತನ್ನ ತಾಯಿ ಯಶೋಧ ಎಂಬುವವರ ಜೊತೆ ಜ್ಞಾನಭಾರತಿಯ ಜ್ಞಾನಜ್ಯೋತಿನಗರದಲ್ಲಿ ವಾಸವಿದ್ದಳು. ಕಳೆದ ಒಂದು ವಾರದಿಂದ ವಿಜಯಲಕ್ಷ್ಮಿ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News