ಸೇತುವೆಗೆ ಢಿಕ್ಕಿ ಹೊಡೆ ಬೈಕ್‌: ಸವಾರ ಸ್ಥಳದಲ್ಲೇ ಮೃತ್ಯು

Update: 2023-08-22 13:44 GMT

ಸುಹೇಲ್‌ ಪರ್ವೇಝ್- ಮೃತ ಯುವಕ 

ಕಲಬುರಗಿ: ದ್ವಿಚಕ್ರ ವಾಹನವೊಂದು ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ತಾಪುರ ಪಟ್ಟಣದ ಹೊರವಲಯದ ಕರದಾಳ ರಸ್ತೆಯ ಸೇತುವೆ ಬಳಿ ಸೋಮವಾರ ರಾತ್ರಿ ವರದಿಯಾಗಿದೆ.

ಚಿತ್ತಾಪುರ ಪಟ್ಟಣದ ಯುವಕ ಸುಹೇಲ್‌ ಪರ್ವೇಝ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಪರ್ವೇಝ್ ಸೋಮವಾರ ರಾತ್ರಿ ಬುಲೆಟ್ ಬೈಕಿನಲ್ಲಿ ಕರದಾಳ ಗ್ರಾಮಕ್ಕೆ ಹೋಗಿ ಬರುವುದಾಗಿ ಮನೆಯವರಿಗೆ ಹೇಳಿ ಹೋಗಿದ್ದಾನೆ. ಆದರೆ ರಾತ್ರಿ ವಾಪಸ್ಸು ಬರದೇ ಇರುವುದರಿಂದ ಮನೆಯವರು ಗಾಬರಿಗೊಂಡಿದ್ದರು.

ಮಂಗಳವಾರ ಬೆಳಗ್ಗೆ ಸೇತುವೆ ಬಳಿ ಆತನ ಮೃತದೇಹ ಹಾಗೂ ಬೈಕ್ ನೋಡಿ ಕೆಲವರು ಪೋಲಿಸರಿಗೆ ತಿಳಿಸಿದ್ದಾರೆ. ಸಿಪಿಐ ಪ್ರಕಾಶ ಯಾತನೂರ, ಪಿಎಸ್ಐ ಶ್ರೀಶೈಲ್ ಅಂಬಾಟಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಚಿತ್ತಾಪುರ ಪೋಲಿಸ್ ಠಾಣೆಯಲ್ಲಿಈ ಸಂಬಂಧ ಪ್ರಕರಣ ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News