ಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ: ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯಿಂದ 2 ತಂಡಗಳ ರಚನೆ

Update: 2023-07-10 17:48 GMT

ಬೆಂಗಳೂರು: ರಾಜ್ಯದಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಹಾಗೂ ಯುವ ಬ್ರಿಗೇಡ್ ಕಾರ್ಯಕರ್ತ ಮೈಸೂರಿನ ವೇಣುಗೋಪಾಲ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲನೆಗಾಗಿ ಬಿಜೆಪಿ ಎರಡು ತಂಡಗಳನ್ನು ರಚನೆ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಈ ತಂಡಗಳನ್ನು ರಚನೆ ಮಾಡಲಾಗಿದ್ದು, ಇದರಲ್ಲಿ ಒಂದು ತಂಡ ನಾಳೆ ಬೆಳಗಾವಿಗೆ ಹಾಗೂ ಇನ್ನೊಂದು ತಂಡ ಮೈಸೂರಿಗೆ ತೆರಳಿ ಪ್ರಕರಣದ ಕುರಿತು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಮಾಹಿತಿ ಕಲೆ ಹಾಕಲಿವೆ. 

ಜೈನಮುನಿ ಕಾಮಕುಮಾರ ಸ್ವಾಮೀಜಿ ಹತ್ಯೆ ಸಂಬಂಧ ಸತ್ಯಾಸತ್ಯತೆ ಪರಿಶೀಲನಾ ತಂಡದ ನೇತೃತ್ವವನ್ನು ನಳಿನ್​ ಕುಮಾರ್ ಕಟೀಲ್ ಹಾಗೂ ಮೈಸೂರಿನ ವೇಣುಗೋಪಾಲ್​ ಹತ್ಯೆಯ ಸತ್ಯಾಸತ್ಯತೆ ಪರಿಶೀಲನಾ ತಂಡದ ನೇತೃತ್ವವನ್ನು ಸಿ.ಟಿ.ರವಿ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News