ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ: ಪ್ರಿಯಾಂಕ್ ಖರ್ಗೆ

Update: 2023-07-10 06:02 GMT

ಬೆಂಗಳೂರು: ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು. ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ ಎಂದು ಹೇಳಿದ್ದಾರೆ.

ಬಿಜೆಪಿ ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News