ಬಿಜೆಪಿ ಈಗ ‘ಬಾಂಬ್ ಜನತಾ ಪಾರ್ಟಿ’ : ಕಾಂಗ್ರೆಸ್ ಲೇವಡಿ

Update: 2024-04-05 17:36 GMT

ಬೆಂಗಳೂರು : ‘ಭ್ರಷ್ಟ ಜನತಾ ಪಾರ್ಟಿ’ ಎಂದು ಹೆಸರಾಗಿದ್ದ ಬಿಜೆಪಿ ಈಗ ‘ಬಾಂಬ್ ಜನತಾ ಪಾರ್ಟಿ’ ಎಂಬ ಹೆಸರು ಪಡೆಯಲು ಮುಂದಾಗಿದೆಯೇ?’ ಎಂದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಇಂದಿಲ್ಲಿ ಲೇವಡಿ ಮಾಡಿದೆ.

ಶುಕ್ರವಾರ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ‘ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿದ್ದ NIA ಈಗ ಆರೋಪಿಗಳನ್ನು ಹುಡುಕುತ್ತಾ ಬಿಜೆಪಿ ಬಾಗಿಲಲ್ಲಿ ಬಂದು ನಿಂತಿದೆ. ಈ ಪ್ರಕರಣದಲ್ಲಿ ಬಿಜೆಪಿ ಮುಖಂಡ, ತೀರ್ಥಹಳ್ಳಿ ತಾಲೂಕಿನ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನು ಬಂಧಿಸಿದೆ’ ಎಂದು ತಿಳಿಸಿದೆ.

‘ನಾವು ಬ್ರಾಂಡ್ ಬೆಂಗಳೂರು ಮಾಡಲು ಹೊರಟಿದ್ದರೆ ಬಿಜೆಪಿ ‘ಬಾಂಬ್ ಬೆಂಗಳೂರು’ ಮಾಡಲು ಹೊರಟಿದೆಯೇ?, ಸರಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿ ತಮ್ಮ ಕಾರ್ಯಕರ್ತರ ಮೂಲಕ ಷಡ್ಯಂತ್ರ ರೂಪಿಸಿದೆಯೇ?. ಎನ್‍ಐಎ ತನಿಖಾ ಸಂಸ್ಥೆ ಬಿಜೆಪಿ ಕೇಂದ್ರ ಕಚೇರಿ ‘ಜಗನ್ನಾಥ ಭವನ’ವನ್ನೂ ಒಮ್ಮೆ ಶೋಧಿಸಿದರೆ ಸೂಕ್ತವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News