ಪೊಲೀಸ್ ಠಾಣೆಗೆ ನುಗ್ಗಿ ಧಮ್ಕಿ ಹಾಕಿದ ಬಿಜೆಪಿ ಶಾಸಕ ಹರೀಶ್ ಪೂಂಜಾ | ಬಿಜೆಪಿಯವರು ಕ್ರಿಮಿನಲ್‍ಗಳ ರಕ್ಷಕರು ಎಂದು ಸಾಬೀತಾಯ್ತು ಎಂದ ಕಾಂಗ್ರೆಸ್

Update: 2024-05-19 12:49 GMT

ಬೆಂಗಳೂರು : ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ’ ಎಂದು ಕಾಂಗ್ರೆಸ್ ಗಂಭೀರ ಆರೋಪವನ್ನು ಮಾಡಿದೆ.

ರವಿವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕುವ ಮೂಲಕ ಬಿಜೆಪಿ ಎಂದಿಗೂ ಕ್ರಿಮಿನಲ್‍ಗಳ ರಕ್ಷಕರು ಎಂಬುದನ್ನು ಸಾಬೀತು ಮಾಡಿದ್ದಾರೆ’ ಎಂದು ದೂರಿದೆ.

‘ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯುತ್ತ, ಕ್ರಿಮಿನಲ್‍ಗಳಿಗೆ ಬೆಂಬಲ ನೀಡುತ್ತ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಬಿಜೆಪಿ ಕೆಲಸಗಳಿಗೆ ಕಡಿವಾಣ ಹಾಕುವುದಕ್ಕೆ ನಮ್ಮ ಸರಕಾರ ಸಮರ್ಥವಾಗಿದೆ’ ಎಂದು ಕಾಂಗ್ರೆಸ್ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದೆ.

‘ರಾಜ್ಯದ ಜನತೆ ತೀವ್ರ ಬರದಿಂದ ನಲುಗುತ್ತಿದ್ದಾರೆ, ಕೃಷ್ಣಾ ನದಿ ಬತ್ತಿ ಹೋಗುತ್ತಿದೆ, ಒಪ್ಪಂದದ ಪ್ರಕಾರ ಮಹಾರಾಷ್ಟ್ರ ಸರಕಾರ ಕೋಯ್ನಾ ಡ್ಯಾಮ್‍ನಿಂದ ನೀರು ಬಿಡಬೇಕು. ಆದರೆ ಮಹಾರಾಷ್ಟ್ರ ಸರಕಾರ ಒಪ್ಪಂದಂತೆ ನೀರು ಬಿಡಲು ತಯಾರಿಲ್ಲ, ನಮ್ಮ ಸರಕಾರ ಬೀಳಿಸಲು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸುಪಾರಿ ಕೊಡುವ ಬಿಜೆಪಿ ನಾಯಕರು ರೈತರ ಹಿತಕ್ಕಾಗಿ ನೀರು ಬಿಡುವಂತೆ ಕೇಳುವುದಿಲ್ಲವೇಕೆ?’ ಎಂದು ಕಾಂಗ್ರೆಸ್ ಎಕ್ಸ್‌ ನಲ್ಲಿ ಪ್ರಶ್ನಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News