ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಹೊರಗಿಡಿ: ಬೊಮ್ಮಾಯಿಗೆ ಮನವಿ ಮಾಡಿದ ಶಾಸಕ

Update: 2023-06-25 16:58 GMT

ಬೆಳಗಾವಿ, ಜೂ.25: ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಪಕ್ಷದಿಂದ ಹೊರಗಿಡಿ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ರವಿವಾರ ಬೆಳಗಾವಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋತಿದ್ದಕ್ಕೆ ಶಾಸಕರು ಸೇರಿ ಎಲ್ಲರೂ ಅಧೈರ್ಯರಾಗಿದ್ದರು. ಆದರೆ, ಕೆಲವರು ಬಿಜೆಪಿಯಲ್ಲಿದ್ದುಕೊಂಡು ಬಲಿಷ್ಠರಾಗಿ ನಂತರ ನಮ್ಮವರನ್ನೆ ಸೋಲಿಸಿದ್ದಾರೆ ಎಂದರು.

ರಾಮದುರ್ಗ, ಕಿತ್ತೂರಿನಲ್ಲಿ ಈ ರೀತಿ ನಮ್ಮವರನ್ನು ಸೋಲಿಸಿದ್ದಾರೆ. ಟಿಕೆಟ್ ಅಂತಿಮವಾದ ಮೇಲೆ ಕೆಲವರು ವಿರೋಧ ಮಾಡುವ ಕೆಲಸ ಮಾಡಿದರು. ಕಾರ್ಯಕರ್ತರಿಗೆ ಈ ವಿಚಾರದಲ್ಲಿ ಬಹಳ ನೋವಾಗಿದೆ. ಒಂದು ಕ್ಷೇತ್ರವನ್ನು ಗೆಲ್ಲಿಸದವರನ್ನು ಕೋರ್ ಕಮಿಟಿಯಲ್ಲಿ ಇಟ್ಟುಕೊಳ್ಳಬೇಡಿ ಎಂದು ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.

''ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನ ಕೈ ಬಿಟ್ಟು ಲೋಕಸಭೆ ಚುನಾವಣೆ ಹೋಗಬೇಕಾಗಿದೆ'' ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News