ಸಂಸದ ಡಿ.ಸುಧಾಕರ್ ಮದ್ಯ ಹಂಚಿಕೆ ಕುರಿತು ಬಿಜೆಪಿ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿ.ಕೆ. ಶಿವಕುಮಾರ್

Update: 2024-07-08 13:58 GMT

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿ.ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಉತ್ತರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೆಲಮಂಗಲದಲ್ಲಿ ನಿನ್ನೆ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡುವ ಮೂಲಕ ಅಬಕಾರಿ ಕಾಯ್ದೆ ಉಲ್ಲಂಘನೆ ಸಂಬಂಧ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ, ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿಯ ಇಂತಹ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಬೇಕು. ಈ ಬಗ್ಗೆ ನಾವು ಕ್ರಮ ಕೈಗೊಳ್ಳಬೇಕೆಂಬುದು ಬೇರೆಯ ವಿಚಾರ. ಆ ಕುರಿತು ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು.

ನೆಲಮಂಗಲದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ಆಯೋಜಿಸಿದ್ದ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಭರ್ಜರಿ ಬಾಡೂಟದೊಂದಿಗೆ ಮದ್ಯ ವಿತರಣೆ ಮಾಡಲಾಗಿತ್ತು. ಕಾರ್ಯಕರ್ತರಿಗೆ ಪೊಲೀಸರ ಸಮ್ಮುಖದಲ್ಲೇ ಮದ್ಯ ಹಂಚಿಕೆ ಮಾಡಲಾಗಿತ್ತು. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News