ಡಿ.26ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ: ಬಿ.ವೈ.ವಿಜಯೇಂದ್ರ

Update: 2023-12-24 14:06 GMT

ಬೆಂಗಳೂರು: ರಾಜ್ಯದ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಡಿ.26ರಂದು ಬಿಜೆಪಿ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಸಭೆ ನಡೆಸಿ, ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಬೇರೆ ಸಮಾಜಗಳು, ಪಂಗಡಗಳು, ಮುಂಬೈ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಎಲ್ಲ ಭಾಗಗಳನ್ನು ಗುರುತಿಸಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದೆ ಎಂದರು.

ಯುವಕರಿಗೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಹಿರಿಯರಿಗೂ ಅವಕಾಶವನ್ನು ಪಕ್ಷ ಮಾಡಿಕೊಟ್ಟಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವುದು ಹಾಗೂ ಮುಂದಿನ ಲೋಕಸಭಾ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ 28 ಕ್ಷೇತ್ರಗಳಲ್ಲೂ ಗೆಲ್ಲುವ ಮೂಲಕ ಪ್ರಧಾನಿ ಮೋದಿ ಅವರಿಗೆ ಬಲ ತುಂಬುವ ಕಾರ್ಯ ಮಾಡಬೇಕಿದೆ ಎಂದು ವಿಜಯೇಂದ್ರ ತಿಳಿಸಿದರು.

ಮೈತ್ರಿ ವಿಚಾರವಾಗಿ ಕುಮಾರಸ್ವಾಮಿ ಅವರ ಜೊತೆ ದಿಲ್ಲಿಯಲ್ಲಿ ಚರ್ಚಿಸಿದ್ದೇವೆ. ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಳಿತು ಚರ್ಚಿಸಿ ಅತಿ ಸುಸೂತ್ರವಾಗಿ ವಿಚಾರವನ್ನು ಶೀಘ್ರವೆ ಬಗೆಹರಿಸುತ್ತೇವೆ ಎಂದು ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News